ಮೈಸೂರು ಮಲ್ಲಿಗೆ - ತೌರಸುಖದೊಳಗೆನ್ನ ಮರೆತಿಹಳು
Submitted by ಪುನರ್... on Fri, 2006-01-20 06:29.
ಕೆ.ಎಸ್. ನರಸಿಂಹಸ್ವಾಮಿ | ಭಾವಗೀತೆ | ಮೈಸೂರು ಮಲ್ಲಿಗೆ
ರಚನೆ: ಕೆ.ಎಸ್. ನರಸಿಂಹಸ್ವಾಮಿ
ಕವನ ಸಂಕಲನ: ಮೈಸೂರು ಮಲ್ಲಿಗೆ
ತೌರಸುಖದೊಳಗೆನ್ನ ಮರೆತಿಹಳು ಎನ್ನದಿರಿ
ನಿಮ್ಮ ಪ್ರೇಮವ ನೀವೇ ಒರೆಯನಿಟ್ಟು
ನಿಮ್ಮ ನೆನಸೇ ನನ್ನ ಹಿಂಡುವುದು ಹಗಲಿನಲಿ
ಇರುಳಿನಲಿ ಕಾಣುವುದು ನಿಮ್ಮ ಕನಸು
ಬೃಂದಾವನದ ಹಣೆಗೆ ಕುಂಕುಮವನಿಡುವಾಗ
ಕಾಣುವುವು ಶ್ರೀತುಳಸಿ ಕೃಷ್ಣತುಳಸಿ
ನೀಲಾಂಬರನ ನಡುವೆ ಚಂದಿರನು ಬಂದಾಗ
ರೋಹಿಣಿಯು ಬೆಳಗುವಳು ಸನ್ನಿಧಿಯಲಿ
ತಾಯಡಿಗೆ ರುಚಿಯೆಂದು ನಾನಿಲ್ಲಿ ಕುಳಿತಿಲ್ಲ
ಇನ್ನು ತಂಗಿಯ ಮದುವೆ ತಿಂಗಳಿಹುದು
ತೌರಪಂಜರದೊಳಗೆ ಸೆರೆಯಾದ ಗಿಳಿಯಲ್ಲ
ಐದು ತಿಂಗಳ ಕಂದ ನಗುತಲಿಹುದು
ಚಿತ್ರದುರ್ಗದ ರೈಲು ನಿತ್ಯವೂ ಓಡೋಡಿ
ಮೈಸೂರ ಸೇರುವುದ ನಾನು ಬಲ್ಲೆ
ನಾಳೆ ಮಂಗಳವಾರ ಮಾರನೆಯ ದಿನ ನವಮಿ
ಆಮೇಲೆ ನಿಲ್ಲುವೆನೇ ನಾನು ಇಲ್ಲಿ
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದಲಿ
ಮರೆತಿಹಳು ಎನ್ನದಿರಿ ಕಣ್ಮರೆಯ ತೋಟದಲಿ
ಅಚ್ಚ ಮಲ್ಲಿಗೆ ಹೂವು ಅರಳು ಬಿರಿಯುತಿಹುದು
ಬಂದುಬಿಡುವೆನು ಬೇಗ ಮುನಿಯದಿರಿ ಕೊರಗದಿರಿ
ಚುಚ್ಚದಿರಿ ಮೊನೆಯಾದ ಮಾತನೆಸೆದು
» 3704 reads
Recent comments
1 week 6 days ago
7 weeks 6 days ago
8 weeks 5 days ago
10 weeks 3 days ago
23 weeks 16 hours ago
30 weeks 2 days ago
39 weeks 11 hours ago
1 year 3 weeks ago
1 year 6 weeks ago
1 year 10 weeks ago